World Environment Day-2023 ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ

ನಾವೆಲ್ಲರೂ ಪರಿಸರದ ಕೂಸುಗಳು – ಡಾ. ಡಿ.ವಿ. ಪರಮಶಿವಮೂರ್ತಿ

ಪರಿಸರವನ್ನು ಮರೆತರೇ ಮಾನವ ಸಂಕುಲ ಬದುಕಲು ಸಾಧ್ಯವಿಲ್ಲ. ಇಂದು ಮಾನವ ಪರಿಸರದ ವಿನಾಶದ ವಿರುದ್ಧ ದಿಕ್ಕಿನಲ್ಲಿಯೇ ಹೆಚ್ಚು ಸಾಗುತ್ತಿದ್ದಾನೆ. ಅದು ಮುಂದಿನ ಭವಿಷ್ಯದಲ್ಲಿ ಮಾನವ ಸಂಕುಲಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಅಭಿಪ್ರಾಯಪಟ್ಟರು.
ಕನ್ನಡ ವಿಶ್ವವಿದ್ಯಾಲಯದ ತೋಟಗಾರಿಕೆ ವಿಭಾಗವು ಚರಿತ್ರೆ ಅಧ್ಯಯನ ವಿಭಾಗದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕನ್ನಡ ವಿಶ್ವವಿದ್ಯಾಲಯದಿಂದ ವನಮಹೋತ್ಸವ ಕಾರ್ಯಕ್ರಮವನ್ನು ಮಾನ್ಯ ಕುಲಪತಿಗಳು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತ ನಾವು ಮುಂದಿನ ಮನುಷ್ಯ ಸಂಕುಲದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟಕೊಂಡು ಈಗಿನಿಂದ ಸ್ವಯಂ ಪ್ರೇರಿತರಾಗಿ ಪರಿಸರದ ಉಳಿವಿಗಾಗಿ ಹಾಗೂ ಒಳತಿಗಾಗಿ ಶ್ರಮ ಪಡಬೇಕಾಗಿದೆ. ಇಂತಹ ಪರಿಸರದ ದಿನಾಚರಣೆಗಳನ್ನು ದಿನಾಚರಣೆಯಾಗಿ ಆಚರಿಸದೆ ಪ್ರತಿದಿನ ಪರಿಸರ ಕಾಳಜಿ ಮಾಡುವ ಮೂಲಕ ನಾವು ಹಸಿರನ್ನು ಉಳಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಹಾಗೂ ಜವಾಬ್ದಾರಿಯುತರಾಗಿ ಬದುಕಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ವಿಭಾಗದ ಸಹಾಯಕ ಕುಲಸಚಿವರಾದ ಎಮ್.ಎಮ್. ಶಿವಪ್ರಕಾಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಗಣ್ಯರನ್ನು ಸ್ವಾಗತಿಸಿದರು. ಮಾನ್ಯ ಕುಲಸಚಿವರಾದ ಡಾ. ಎ. ಸುಬ್ಬಣ್ಣ ರೈ. ಸಹಾಯಕ ತೋಟಗಾರಿಕ ಅಧಿಕಾರಿ ಬೀರಪ್ಪ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತಿರಿದ್ದರು.